ನನ್ನ ಹತ್ತಿರ ಭಯಂಕರ ಆಯುಧಗಳಿವೆ ! – ಸ್ವಾ. ಸಾವರಕರ




ಲಂಡನ್ ನಗರದಲ್ಲಿ ಒಂದು ದಿನ ಗುಪ್ತಚರರು ಸ್ವಾ. ಸಾವರಕರರನ್ನು ದಾರಿ ಮಧ್ಯದಲ್ಲಿ ನಿಲ್ಲಿಸಿ ಕೇಳಿದರು, "ಮಹಾಶಯರೇ, ಕ್ಷಮಿಸಿರಿ. ನಮಗೆ ನಿಮ್ಮ ಬಗ್ಗೆ ಸಂಶಯವಿದೆ. ನಿಮ್ಮ ಹತ್ತಿರ ಘಾತಕ ಆಯುಧಗಳಿವೆ ಎಂದು ನಿಶ್ಚಿತ ಸುಳಿವು ಸಿಕ್ಕಿದೆ. ಆದ್ದರಿಂದ ನಿಮ್ಮ ತಪಾಸಣೆಯನ್ನು ಮಾಡುತ್ತೇವೆ". ಸಾವರಕರರು ನಿಂತರು, ಗುಪ್ತಚರರು ತಪಾಸಣೆ ಮಾಡಿದರು. ಆದರೆ ಏನೂ ಸಿಗಲಿಲ್ಲ. ಆಗ ಗುಪ್ತಚರರ ಪ್ರಮುಖ ಅಧಿಕಾರಿಗಳು ಕೇಳಿದರು, "ಕ್ಷಮಿಸಿರಿ ತಪ್ಪು ಸುದ್ದಿಯಿಂದಾಗಿ ನಿಮಗ ತೊಂದರೆ ನೀಡಿದೆವು". ಆಗ ಸಾವರಕರರು ಹೇಳಿದರು, "ನಿಮಗೆ ಸಿಕ್ಕ ಸುಳಿವು ತಪ್ಪಲ್ಲ. ನನ್ನ ಬಳಿ ಘಾತಕ ಆಯುಧವಿದೆ". ಜೇಬಿನಲ್ಲಿದ್ದ ಪೆನ್ನನ್ನು ತೋರಿಸಿ ಹೇಳಿದರು, "ನೋಡಿ ಇದೇ ಆ ಆಯುಧ, ಇದರಿಂದ ಹೊರ ಬರುವ ಒಂದೊಂದು ಶಬ್ಧ ಯುವಕರಿಗೆ ಅನ್ಯಾಯದ ವಿರುದ್ಧ ಹೋರಾಡುವ ಪ್ರೇರಣೆಯನ್ನು ನೀಡುತ್ತದೆ. ಈ ಶಬ್ಧಗಳಿಂದ ದೇಶಭಕ್ತರ ರಕ್ತ ಕುದಿಯುತ್ತದೆ ಮತ್ತು ಅವರು ತಮ್ಮ ಪ್ರಾಣವನ್ನು ಒತ್ತೆ ಇಟ್ಟು ಹೋರಾಡಲು ಸಿದ್ಧರಾಗುತ್ತಾರೆ".