Menu Close

ದೇವಸ್ಥಾನ-ಸಂಸ್ಕೃತಿಯ ರಕ್ಷಣೆಗಾಗಿ ಫೆಬ್ರವರಿ 20 ರಂದು ಹಾಸನ‘ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು’ ನಡೆಯಲಿದೆ

ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ !

ಹಾಸನ : ದೇವಸ್ಥಾನಗಳು ಹಿಂದೂ ಧರ್ಮದ ಅತ್ಯಂತ ಪವಿತ್ರ ಕ್ಷೇತ್ರಗಳು. ದೇವಸ್ಥಾನಗಳಲ್ಲಿನ ದೈವಿ ಚೈತನ್ಯದಿಂದಾಗಿ ಆಧುನಿಕ ಕಾಲದಲ್ಲಿಯೂ ಸಮಾಜವು ದೇವಸ್ಥಾನಗಳ ಕಡೆಗೆ ಆಕರ್ಷಿತವಾಗುತ್ತಿದೆ. ಆದರೆ ಇತ್ತೀಚೆಗೆ ದೇವಸ್ಥಾನಗಳ ಮೇಲೆ ವಿವಿಧ ರೀತಿಯ ಆಕ್ರಮಣಗಳು ನಡೆಯುತ್ತಿವೆ. ಉದಾಹರಣೆಗೆ ದೇವಸ್ಥಾನಗಳ ಸರಕಾರಿಕರಣ, ದೈವಸ್ಥಾನಗಳನ್ನು ಅಪವಿತ್ರಗೊಳಿಸುವುದು, ಮೂರ್ತಿಭಂಜನ, ಅನಧಿಕೃತವೆಂದು ದೇವಸ್ಥಾನಗಳನ್ನು ಧ್ವಂಸಗೊಳಿಸುವುದು, ದೇವಸ್ಥಾನಗಳ ಜಮೀನುಗಳ ಲೂಟಿ, ದೇವನಿಧಿ ಅಪವ್ಯಯ, ಹೀಗೆ ಮುಂತಾದ ಸಮಸ್ಯೆಗಳು ಮುಗಿಲು ಮುಟ್ಟಿದೆ. ಅದಕ್ಕಾಗಿ ದೇವಸ್ಥಾನಗಳಲ್ಲಿನ ದೇವತಾತತ್ತ್ವವನ್ನು ಕಾಪಾಡಲು, ದೇವಸ್ಥಾನಗಳಲ್ಲಿ ಧರ್ಮಪ್ರಸಾರ ಮಾಡಲು, ದೇವಸ್ಥಾನಗಳಲ್ಲಿ ಭಕ್ತಾಧಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು, ದೇವಸ್ಥಾನಗಳ ಸಂಘಟನೆ ಮಾಡಲು, ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆಯನ್ನು ಅಳವಡಿಸಲು ಹಿಂದೂ ಜನಜಾಗೃತಿ ಸಮಿತಿ ಮತ್ತು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯುಕ್ತ ಆಶ್ರಯದಲ್ಲಿ ಇದೇ ಫೆಬ್ರುವರಿ 20, 2024 ರಂದು ಸಪ್ತಪದಿ ಸೌದಾಮಿನಿ ಸಭಾಂಗಣ , ಸೀತಾರಾಮಾಂಜನೇಯ ದೇವಸ್ಥಾನದ ಆವರಣ, ಪಾರ್ಕ್ ರಸ್ತೆ, ಹಾಸನದಲ್ಲಿ ‘ಜಿಲ್ಲಾ ಮಟ್ಟದ ದೇವಸ್ಥಾನ ಪರಿಷತ್ತು’ ಆಯೋಜಿಸಲಾಗಿದೆ. ಈ ಪರಿಷತ್ತಿನಲ್ಲಿ ಹಾಸನ ಜಿಲ್ಲೆಯಿಂದ 2೦೦ ಕ್ಕಿಂತ ಹೆಚ್ಚು ಆಮಂತ್ರಿತ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು, ಪುರೋಹಿತರು, ಪ್ರತಿನಿಧಿಗಳು, ದೇವಸ್ಥಾನಗಳ ರಕ್ಷಣೆಗಾಗಿ ಹೋರಾಡುವ ನ್ಯಾಯವಾದಿಗಳು, ಧಾರ್ಮಿಕ ಚಿಂತಕರು, ಮುಂತಾದವರು ಪಾಲ್ಗೊಳ್ಳಲಿದ್ದಾರೆ, ಎಂದು ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ಸಮನ್ವಯಕರಾದ ಶ್ರೀ. ಚಂದ್ರ ಮೊಗವೀರ ಇವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ವೇಳೆ ಗಣಪತಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ. ರಾಘವೇಂದ್ರ ಆಚಾರ್ ಮತ್ತು ಕಾಳಿಕಾಂಬ ದೇವಸ್ಥಾನದ ಟ್ರಸ್ಟಿಗಳಾದ ಶ್ರೀ. ನಾಗೇಶ್ ಆಚಾರ್ ಮುಂತಾದವರು ಉಪಸ್ಥಿತರಿದ್ದರು.

ಶ್ರೀ. ಚಂದ್ರ ಮೊಗವೀರ ಇವರು ಮುಂದೆ ಮಾತನಾಡಿ, ಮಹಾಸಂಘವು ಕೇವಲ 6 ತಿಂಗಳುಗಳಲ್ಲಿ ದೇಶದಾದ್ಯಂತ 275 ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ (ಡ್ರೆಸ್ ಕೋಡ್) ಜಾರಿಗೆ ತಂದಿದೆ ಮತ್ತು ಮಹಾಸಂಘದ ಅಭಿಯಾನದಿಂದ ಪ್ರೇರಿತಾರದ ಅನೇಕ ವಿಶ್ವಸ್ಥರು ತಮ್ಮ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುತ್ತಿದ್ದಾರೆ. ಹಾಗೂ, ಈ ಪರಿಷತ್ತಿಗೆ ಜಿಲ್ಲೆಯ ಅನೇಕ ಕಡೆಗಳಿಂದ 200 ಕ್ಕಿಂತ ಹೆಚ್ಚು ವಿಶ್ವಸ್ಥರು ಉಪಸ್ಥಿತರಿರಲಿದ್ದಾರೆ ಎಂದರು.

ಈ ದೇವಸ್ಥಾನ ಪರಿಷತ್ತಿನಲ್ಲಿ ಗಣ್ಯರ ಮಾರ್ಗದರ್ಶನ, ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಆಯ್ದ ವಿವಿಧ ವಿಷಯಗಳ ಚರ್ಚಾಕೂಟಗಳು ನಡೆಯಲಿವೆ. ಇದರಲ್ಲಿ ‘ದೇವಸ್ಥಾನಗಳನ್ನು ಸನಾತನ ಧರ್ಮಪ್ರಸಾರ ಕೇಂದ್ರಗಳನ್ನಾಗಿಸುವುದು’, ‘ದೇವಸ್ಥಾನಗಳನ್ನು ಸರಕಾರೀಕರಣದಿಂದ ಮುಕ್ತಮಾಡುವುದು’ ಅನಧಿಕೃತ ಹೆಸರಿನಲ್ಲಿ ದೇವಸ್ಥಾನಗಳನ್ನು ಧ್ವಂಸಗೊಳಿಸುವುದು, ಅನ್ಯಮತೀಯರಿಂದ ದೇವಸ್ಥಾನಗಳ ಭೂಮಿಯ ಅತಿಕ್ರಮಣ ಮತ್ತು ಸರಕಾರವು ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವುದರ ವಿರುಧ್ಧ ಪರಿಹಾರೋಪಾಯ, ದೇವಸ್ಥಾನ ಮತ್ತು ತೀರ್ಥಕ್ಷೇತ್ರಗಳ ಪರಿಸರದಲ್ಲಿ ಮದ್ಯ-ಮಾಂಸ ಇವುಗಳ ನಿಷೇಧ; ದುರ್ಲಕ್ಷಿತ ದೇವಸ್ಥಾನಗಳ ಜೀರ್ಣೋದ್ಧಾರ ಮುಂತಾದ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ. ಈ ಅಧಿವೇಶನವು ಕೇವಲ ಆಮಂತ್ರಿತರಿಗೆ ಮಾತ್ರ ಇದ್ದು ಅಧಿವೇಶನದಲ್ಲಿ ಪಾಲ್ಗೊಳ್ಳಲು 7204082609 ಈ ಮೊಬೈಲ್ ನಂಬರ್ ಗೆ ಸಂಪರ್ಕಿಸಬೇಕು ಎಂದು ದೇವಸ್ಥಾನ ಮಹಾಸಂಘವು ಕರೆ ನೀಡಿದೆ, ಎಂದು ಶ್ರೀ ಚಂದ್ರ ಮೊಗವೀರ ಇವರು ಹೇಳಿದರು.

ಶ್ರೀ ಗಣಪತಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಆಚಾರ ಇವರು ಮಾತಾಡುತ್ತಾ ಈ ಪರಿಷತ್ ನಂತರ ಹಾಸನ ಜಿಲ್ಲಾ ಮಟ್ಟದಲ್ಲಿ ಕೋರ್ ಕಮಿಟಿ ಸ್ಥಾಪನೆ ಮಾಡಿ ಆ ಮೂಲಕ ಮುಂದಿನ ಎಲ್ಲಾ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಹಾಸನದ ಎಲ್ಲಾ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಅಳವಡಿಸುವ ಬಗ್ಗೆಯೂ ಸಾಮೂಹಿಕ ನಿರ್ಣಯ ಮಾಡಲಾಗುವುದು ಎಂದು ತಿಳಿಸಿದರು.

Related News