Menu Close

ಹಬ್ಬ-ಉತ್ಸವದ ಸಂದರ್ಭದಲ್ಲಿ ಸರಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣವನ್ನು ಪ್ರಯಾಣಿಕರಿಂದ ಲೂಟಿ ಮಾಡುವ `ಟ್ರಾವೆಲ್ ಆಪ್’ ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ !

ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ ವತಿಯಿಂದ ಸಾರಿಗೆ ಸಚಿವರಾದ ಶ್ರೀ. ರಾಮಲಿಂಗಾ ರೆಡ್ಡಿ ಇವರಿಗೆ ಮನವಿ

ಶ್ರೀ. ರಾಮಲಿಂಗಾ ರೆಡ್ಡಿ ಇವರಿಗೆ ಮನವಿ ನೀಡುತ್ತಿರುವ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಮೋಹನ್ ಗೌಡ, ಶ್ರೀ. ರಘುನಾಥ್ ನಾವುಡ, ನ್ಯಾಯವಾದಿ ಶಕುಂತಲಾ ಶೆಟ್ಟಿ, ಡಾ. ಮಹೇಶ್ ಕುಮಾರ್ ಬಿ.ಎನ್, ಶ್ರೀ. ವಿನಯ್, ಶ್ರೀ. ಮಲ್ಲಿಕಾರ್ಜುನ್ ಮತ್ತು ಶ್ರೀ. ಶಿವರಾಮ್

ಬೆಂಗಳೂರು : ‘ಮೇಕ್ ಮೈ ಟ್ರಿಪ್’, ‘ರೆಡ್ ಬಸ್’, ‘ಗೋಯಿಬಿಬೋ’, ‘ಸವಾರಿ’, ‘ಇನ್ ಡ್ರೈವ್’, ‘ರ್ಯಾಪಿಡೋ’, ‘ಕ್ವಿಕ್ ರೈಡ್’, ‘ರ್ಯಾಪಿಡೋ’ ನಂತಹ 18 ಖಾಸಗಿ ಪ್ರವಾಸಿ ಆಪ್‌ಗಳು ಕೇಂದ್ರ ಸರಕಾರದ ಅನುಮತಿ ಪಡೆಯದೆ ಅಗ್ರಿಗೇಟರ್‌ನ ವ್ಯವಹಾರ ನಡೆಸುತ್ತಿವೆ. ಅವುಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ದ ವತಿಯಿಂದ ಮಾನ್ಯ ಸಾರಿಗೆ ಸಚಿವರಾದ ಶ್ರೀ. ರಾಮಲಿಂಗಾ ರೆಡ್ಡಿ ಇವರಿಗೆ ಮನವಿ ನೀಡಲಾಯಿತು. ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಮೋಹನ್ ಗೌಡ, ಶ್ರೀ. ಶಿವರಾಮ್, ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಪರಿಷತ್‌ನ ರಾಷ್ಟ್ರೀಯ ಕಾರ್ಯದರ್ಶಿಗಳಾದ ಡಾ. ಬಿ.ಎನ್. ಮಹೇಶ್ ಕುಮಾರ, ಕಾರ್ಮಿಕ ಪ್ರತಿಷ್ಠಾನದ ಶ್ರೀ. ಮಲ್ಲಿಕಾರ್ಜುನ್, ನ್ಯಾಯವಾದಿ ಶಕುಂತಲಾ ಶೆಟ್ಟಿ, ಯುವ ಮುಖಂಡ ಶ್ರೀ. ವಿನಯ್ ಹಾಗೂ ಶ್ರೀ. ರಘುನಾಥ್ ನಾವಡ ಮತ್ತಿತರರು ಉಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಶ್ರೀ. ಮೋಹನ್ ಗೌಡ, ಸಮಿತಿಯ ಸುರಾಜ್ಯ ಅಭಿಯಾನದ ವತಿಯಿಂದ ಈಗಾಗಲೇ ಮಹಾರಾಷ್ಟ್ರದಲ್ಲಿ ಕಳೆದ ೪ ವರ್ಷಗಳಿಂದ ಬೆಂಬತ್ತುವಿಕೆ ಮಾಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿರುವ ಈ ಟ್ರಾವೆಲ್ ಆಪ್‌ಗಳು ಮತ್ತು ಟ್ರಾವೆಲ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನೇಕ ಆಂದೋಲನಗಳು ನಡೆಸಿದೆವು ಮತ್ತು ದೂರುಗಳು ನೀಡಿವೆ; ಅನಂತರ ಅಲ್ಲಿನ ಸರಕಾರ ಕೇವಲ ಅಪ್ಲಿಕೇಶನ್ ಅನ್ನು ಮುಚ್ಚುವ ಅಧಿಸೂಚನೆಯನ್ನು ನೀಡಲಾಗಿದೆ. ಕೋಟಿಗಟ್ಟಲೆ ಪ್ರಯಾಣಿಕರನ್ನು ಲೂಟಿ ಮಾಡುತ್ತಿರುವ ಈ ಅಕ್ರಮ ಅಗ್ರಿಗೇಟರ್ ಆಪ್ ವಿರುದ್ಧ ಈ ಕ್ರಮ ಸಾಕಾಗುವುದಿಲ್ಲ. ರಾಜ್ಯದಲ್ಲಿ ಈ ಕಂಪನಿಗಳ ಭಾರೀ ಲೂಟಿಯ ಬಗ್ಗೆ ವಿಶೇಷ ಲೆಕ್ಕಪರಿಶೋಧನೆ ನಡೆಸಿ, ಈ ಕಂಪನಿಗಳಿಗೆ ಭಾರೀ ಆರ್ಥಿಕ ದಂಡ ವಿಧಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ‘ಮೋಟಾರು ವಾಹನ ಕಾಯಿದೆ ೧೯೮೮’ ರ ಸೆಕ್ಷನ್ ೯೩ (೧) ರ ನಿಬಂಧನೆಗಳ ಪ್ರಕಾರ, ಆಪ್ ಮತ್ತು ವೆಬ್‌ಸೈಟ್‌ಗಳ ಮೂಲಕ ಪ್ರಯಾಣಿಕರ ಸಾರಿಗೆ ವ್ಯವಹಾರವನ್ನು ನಡೆಸಲು ಕೇಂದ್ರ ಸರಕಾರದ ಮಾರ್ಗಸೂಚಿಗಳಿಗೆ ಒಳಪಟ್ಟಿರುವ ಸಕ್ಷಮ ಪ್ರಾಧಿಕಾರದಿಂದ ಪರವಾನಗಿ ಅಗತ್ಯವಿದೆ; ಆದರೆ, ಈ ರೀತಿ ಮಾಡದೆ ವರ್ಷಗಳೇ ಅಕ್ರಮ ವ್ಯವಸಾಯ ನಡೆಯುತ್ತಿದೆ. ಮೂಲತಃ, ಈ ಅಗ್ರಿಗೇಟರ್ ಅಪ್ಲಿಕೇಶನ್‌ಗಳು ರಾಜ್ಯದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ವಂಚನೆ ಮಾಡಿವೆ. ಹೀಗಾಗಿ ದೇಶಾದ್ಯಂತ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ಅಲ್ಲದೇ ಇದುವರೆಗೆ ಅಕ್ರಮವಾಗಿ ಎಷ್ಟು ರೂಪಾಯಿ ಸಂಗ್ರಹಿಸಿದೆ ? ಇದರಲ್ಲಿ ಬೇರೆ ಯಾರು ಭಾಗಿಯಾಗಿದ್ದಾರೆ ? ಇದು ’ಮಹದೇವ್ ಬೆಟ್ಟಿಂಗ್ ಆಪ್’ ನಂತಹ ದೊಡ್ಡ ಹಗರಣವೇ ? ಈ ಪ್ರಕರಣವನ್ನು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಿಂದ (ಈಡಿಯಿಂದ) ಆಳವಾಗಿ ತನಿಖೆ ನಡೆಸುವಂತೆ ಆಗ್ರಹಿಸಿದ್ದು, ಈ ಬಗ್ಗೆ ಮಾನ್ಯ ಗೃಹಸಚಿವ ಹಾಗೂ ಮುಖ್ಯಮಂತ್ರಿ ಸಹಿತ ಪ್ರಧಾನಿ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವರ ಬಳಿಯೂ ಮತ್ತೊಮ್ಮೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ’ ಎಂದು ಮೋಹನ್ ಗೌಡ ಇವರು ಹೇಳಿದ್ದಾರೆ.

Related News